ನನ್ನ ಅಧಿಕಾರವಧಿಯಲ್ಲಿ ಈ ಹಗರಣ ಹೊರ ಬಂದಿತ್ತು, ನಾನೇ ತನಿಖೆಗೆ ಆದೇಶಿಸಿದ್ದೆ. ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ ಎಂದು ಐಎಂಎ ಹಗರಣದ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ನನ್ನ ಸಿಎಂ ಅವಧಿಯಲ್ಲಿ ಈ ಹಗರಣ ಹೊರ ಬಂದಿತ್ತು. ನಾನು ಸಿಸಿಬಿಗೆ ಈ ಹಗರಣದ ತನಿಖೆ ನಡೆಸುವಂತೆ ಆದೇಶ ಮಾಡಿದ್ದೆ. ಈ ವೇಳೆಗೆ ಆತ ದೇಶ ಬಿಟ್ಟು ದುಬೈಗೆ ಪರಾರಿಯಾಗಿದ್ದ. ನಮ್ಮ ಅಧಿಕಾರಿಗಳು ಹಗರಣದ ಆರೋಪಿಯನ್ನ ಬಂಧಿಸಿ ಕರೆತಂದಿದ್ದರು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವಿಚಾರಣೆ ವೇಳೆ ಕುಮಾರಸ್ವಾಮಿ ಅವರಿಗೆ ಸೇರಬೇಕು ಎಂದು ಹಣ ಸಂಗ್ರಹಣೆ ಮಾಡಿದ್ದಾರೆ. ಆದರೆ ಆ ಹಣ ಕುಮಾರಸ್ವಾಮಿಗೆ ಸೇರಿಲ್ಲಾ ಎಂಬ ಚರ್ಚೆ ನಡೆಯುತ್ತಿದೆ. ಯಾರ ಮೇಲೆ ಬೇಕಾದರೂ ಕ್ರಮ ಕೈಗೊಳ್ಳಲಿ, ಜನರ ಹಣವನ್ನ ಲೂಟಿ ಮಾಡಿದವರಿಗೆ ಈ ಕ್ಷಣದವರೆಗೆ ರಕ್ಷಣೆ ಕೊಟ್ಟವನಲ್ಲಾ ಎಂದು ಅವರು ಹೇಳಿದ್ದಾರೆ.
ರೋಷನ್ ಬೇಗ್ ಒಂದು ಬಾರಿ ಸಂಜೆ ವೇಳೆಗೆ ಕೃಷ್ಣ ಕಚೇರಿಯಲ್ಲಿದ್ದಾಗ ಒಂದು ಇಫ್ತಾರ್ ಕೂಟ ಇದೆ ಬರಬೇಕೆಂದು ಹಠ ಹಿಡಿದಿದ್ದರು. ಅದರಂತೆ ಕೃಷ್ಣ ಕಚೇರಿಯಿಂದ ನಾನು ಅಲ್ಲಿಗೆ ಹೋಗಿದ್ದೆ. ಆ ವೇಳೆಗೆ ಅಲ್ಲಿ ಇಬ್ಬರು ವ್ಯಕ್ತಿಗಳು ಇದ್ದರು, ಅವರು ಯಾರು ಎಂದು ನನಗೆ ಗೊತ್ತಿರಲಿಲ್ಲಾ. ರೋಷನ್ ಬೇಗ್ ಅವರು ಮಹಾನ್ ದಾನಿಗಳು, ಅನೇಲ ಶಿಕ್ಷಣ ಸಂಸ್ಥೆಗಳಿಗೆ ಇವರಿಂದ ಧಾನ ಧರ್ಮಾ ಮಾಡಿದ್ದಾರೆ ಅಂತಾ ಹೇಳಿದ್ದಾರೆ ಅಷ್ಟೆ. ಅಲ್ಲಿಯವರೆಗೆ ಆತ ಯಾರು ಎಂದು ಗೊತ್ತಿರಲಿಲ್ಲಾ. ನಾನೇ ತನಿಖೆಗೆ ಆದೇಶ ಮಾಡಿದ ಮೇಲೆ ನನ್ನ ಪಾತ್ರ ಎಲ್ಲಿ ಇರುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.
ಇದೇ ವೇಳೆ ಒಕ್ಕಲಿಗರಿಗೆ ಮೀಸಲಾತಿ ಬೇಕು ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಅವರು, ಮೀಸಲಾತಿ ಹೋರಾಟ ಬಂದಾಗ ಮಾತಡೋಣ. ಇದು ಎಲ್ಲೊ ಒಂದು ಕಡೆ ದಾರಿ ತಪ್ಪಿ ಹೋಗುತ್ತಿರುವ ಸನ್ನಿವೇಶಗಳು ಕಾಣುತ್ತಿವೆ. ಇಂತಹ ವಿಷಯಗಳ ಮುಖಾಂತರ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ರಾಜಕೀಯವಾಗಿ ಸ್ಥಾನಮಾನ ಪಡೆಯಲು ಒಂದು ವರ್ಗ ಹೊರಟಿದೆ. ಆದರೆ, ಇಂತಹ ಹೋರಾಟದಲ್ಲಿ ಭಾಗಿಯಾಗವನು ನಾನಲ್ಲ, ಇಂತಹ ವಿಷಯಗಳನ್ನ ಇಟ್ಟುಕೊಂಡು ಸಮಾಜದಲ್ಲಿ ಇಕ್ಕಟ್ಟಿಗೆ ಸಿಲುಕಿಸಿ ಸಂಘರ್ಷ ಉಂಟುಮಾಡುಲು ಹೋಗುವವನು ನಾನಲ್ಲಾ, ಆ ಸಮಯ ಬಂದಾಗ ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.