ಸುಧಾಕರ್ ಹೇಳಿಕೆಯನ್ನು ಒಪ್ಪುವ ಬಿಜೆಪಿ ಶಾಸಕರ ಮೇಲೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ" ಎಂಬ ಸಚಿವ ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗಳಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ.