ಬೆಂಗಳೂರು : ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದ ಪ್ರಕರಣದ ಅಡಿಯಲ್ಲಿ ಬೀದರ್ನ ಶಾಹೀನ್ ಶಾಲೆಯ ಆಡಳಿಯ ಮಂಡಳಿಯ ಸದಸ್ಯರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ.
2020ರಲ್ಲಿ ಸಿಎಎ ಹಾಗೂ ಎನ್ಆರ್ಸಿ ಕಾಯ್ದೆಯನ್ನು ವಿರೋಧಿಸಿ ಬೀದರ್ನ ಶಾಹೀನ್ ಶಾಲೆಯ 4,5 ಹಾಗೂ ಆರನೇ ತರಗತಿಯ ವಿದ್ಯಾರ್ಥಿಗಳು ನಾಟಕ ಪ್ರದರ್ಶನ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಶಾಲೆಯ ಆಡಳಿತ ಮಂಡಳಿಯ ನಾಲ್ವರು ಸದಸ್ಯರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗಿತ್ತು.
#Karnataka high court quashed #sedition case against Bidar's Shaheen School international. The case was filed by then #BJP govt alleging the play staged by class 4 students against CAA in 2020 was communal in nature and had slogans against PM Modi. pic.twitter.com/LEcbCbp8MS
— Imran Khan (@KeypadGuerilla) June 14, 2023
ನೀಲೇಶ್ ಎಂಬವರು ಬೀದರ್ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಈ ಘಟನೆಯ ಸಂಬಂಧ ದೂರು ದಾಖಲಿಸಿದ್ದರು. ಆದರೆ ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಲ್ಲಾವುದ್ದೀನ್ ಸೇರಿದಂತೆ ಇತರರು ಅರ್ಜಿ ಸಲ್ಲಿಕೆ ಮಾಡಿದ್ದರು.