ಲೋಕಸಭಾ(LokaSaba) ಚುನಾವಣೆ(Election)ಗೆ 20 ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿ(BJP)ಯಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಪುತ್ತಿಲ್ಲ ಬಂಡಾಯ ಅಭ್ಯರ್ಥಿ ಆಗಿ ಕಣಕ್ಕಳಿಯುವುದನ್ನು ತಡೆಯುವ ಪ್ರಯತ್ನ ಮಾಡಲಾಗಿದೆ. B.S ಯಡಿಯೂರಪ್ಪ(BS Yediyurappa) ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ(Arun Kumar Putthila) ಅವರನ್ನು ಕರೆತಂದು ಸಮಾಧಾನ ಮಾಡುವ ಕೆಲಸ ಮಾಡಲಾಗಿದೆ.
ಈ ಬಗ್ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ಕುಮಾರ್(Sunil Kumar) ಮಾತನಾಡಿ, ಪುತ್ತಿಲ ಪರಿವಾರ ಮೋದಿ ಪರಿವಾರದ ಜೊತೆಗೆ ಇರಬೇಕೆಂದು ನಿಶ್ಚಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಅಭ್ಯರ್ಥಿಯ ಗೆಲುವುಗಾಗಿ ಶ್ರಮಿಸುತ್ತಾರೆ. ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಮಾತುಕತೆ ಆಗಿದೆ. ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಪಕ್ಷ(Party) ಸೂಕ್ತವಾದ ಸ್ಥಾನಮಾನ ಸಿಗಲಿದೆ ಎಂದಿದ್ದಾರೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಬಸವರಾಜ ಬೊಮ್ಮಾಯಿ(Basavaraj Bommai) ಮಾಜಿ ಸಚಿವ ಬಿ.ಸಿ ಪಾಟೀಲ್(BC Patil) ಭೇಟಿ ಮಾಡಿ ಕಾಲಿಗೆ ನಮಸ್ಕಾರ ಮಾಡಿದ್ದಾರೆ. ಕಲ್ಯಾಣ ನಗರದ ಬಿ.ಸಿ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಬಿಸಿ ಪಾಟೀಲ್ ಅವರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ಲೋಖಸಭಾ(LokaSaba) ಚುನಾವಣೆಯಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಕೋರಿದ್ದಾರೆ. ಬಿಸಿ ಪಾಟೀಲ್ ಬಂಡಾಯದ ಭೀತಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬೆಳಗಾವಿ ಲೋಕಸಭಾ ಅಭ್ಯರ್ಥಿ ಆಗಲು ಕೊನಗೂ ಜಗದೀಶ್ ಶೆಟ್ಟರ್(Jagadesh Shetter) ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಗದಗ – ಹಾವೇರಿ ಅಥವಾ ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಶೆಟ್ಟರ್ಗೆ ಎರಡೂ ಕಡೆಯಲ್ಲೂ ಟಿಕೆಟ್(Ticket) ಕೈ ತಪ್ಪಿತ್ತು. ಇದರಿಂದ ಕುಪಿತರಾಗಿದ್ದ ಶೆಟ್ಟರ್, ರಾಯಚೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಬಿ.ಎಸ್ ಯಡಿಯೂರಪ್ಪ ಹಾಗು ವಿಜಯೇಂದ್ರ(Vijayendra) ಸಮ್ಮುಖದಲ್ಲಿ ನಡೆದ ಸಂಧಾನದಲ್ಲಿ ಬೆಳಗಾವಿಯಿಂದ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗ್ತಿದೆ.
#BJPKarnataka #Lokasaba #Election2024 #BYVijayendra #JagadeshShetter