ಬಿಹಾರ ಮೈತ್ರಿ ಸರ್ಕಾರವನ್ನ ತಮ್ಮ ಹೇಳಿಕೆಗಳ ಮೂಲಕ ಟೀಕಿಸಿದ ಕೃಷಿ ಸಚಿವ ಸುಧಾಕರ್ ಸಿಂಗ್ ಸಚಿವ ಸ್ಥಾನಕ್ಕೆ ದಢೀರ್ ರಾಜೀನಾಮೆ ನೀಡುವ ಮೂಲಕ ರಾಷ್ಟ್ರ ಹಾಗೂ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸುಧಾಕರ್ ಸಿಂಗ್ ತಂದೆ RJD ರಾಜ್ಯ ಘಟಕದ ಅಧ್ಯಕ್ಷ ಜಗದಾನಂದ್ ಸಿಂಗ್ ಮೈತ್ರಿಯಲ್ಲಿ ಬಿರುಕು ಹೆಚ್ಚಾಗುತ್ತಿರುವುದನ್ನು ತಡೆಯಲು ಸುಧಾಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕೃಷಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ಇತ್ತೀಚಿಗೆ ಸರಣಿ ಹೇಳಿಕೆಗಳನ್ನು ನೀಡುವ ಮೂಲಕ ಬಿಹಾರ ಮೈತ್ರಿ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದ್ದರು.