ರಾಜ್ಯದಲ್ಲಿ ಇರುವುದು ಶುದ್ಧ ಬಿಜೆಪಿ ಸರ್ಕಾರವಲ್ಲ, ಇದು ಬಿಜೆಪಿಯಾಗಿ ಉಳಿದಿಲ್ಲ. ಇದು ಮೂರು ಸರ್ಕಾರ ಆಗಿದೆ ಮತ್ತು ನನ್ನ ಕೆಲಸದಲ್ಲಿ ಬೇರೆಯವರಯ ಮೂಗು ತೂರಿಸಿದರೆ ಹೇಗೆ? ಎಂದು ಪರೋಕ್ಷವಾಗಿ ವಿಜೇಯೇಂದ್ರ ಕುರಿತು ಸಚಿವ ಸಿಪಿ ಯೋಗೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯೋಗೇಶ್ವರ್, ಸಿಎಂ ,ಬದಲಾವಣೆ ಬಗ್ಗೆ ಮಾತನಾಡಿದ ಅವರು, ಆ ಸಂದರ್ಭ ಬಂದಾಗ ಚರ್ಚೆ ಮಾಡ್ತೇನೆ. ನಮ್ಮ ಬೆಂಬಲ ಇದೀಯೋ ಇಲ್ವೋ ಅನ್ನೋದನ್ನು ನಾಲ್ಕು ಗೋಡೆ ಮಧ್ಯೆ ತಿಳಿಸುತ್ತೇನೆ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ನಾನೊಬ್ಬ ಸಚಿವ ಇವತ್ತು ನನ್ನ ಸಚಿವಗಿರಿಯನ್ನು ನನ್ ಮಗ ಚಲಾಯಿಸಿದ್ರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸೋದು ಇಷ್ಟವಿಲ್ಲ ಎನ್ನುವ ಮೂಲಕ ಬಿ ವೈ ವಿಜಯೇಂದ್ರ ಹಸ್ತಕ್ಷೇಪ ಬಗ್ಗೆ ಪರೋಕ್ಷವಾಗಿ ಸಿಪಿವೈ ಆಕ್ಷೇಪ ಮಾಡಿದ್ದಾರೆ.
ಮುಂದುವರೆದ ಸಿಪಿವೈ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡ್ಕೊಂಡಿವೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಹೊಂದಾಣಿಕೆ ಮಾಡ್ಕೊಂಡಿದೆ ನಮ್ಮ ಸರ್ಕಾರ ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಬದಲಾವಣೆ ನನ್ನ ಮೂಲ ಉದ್ದೇಶ ಅಲ್ಲ. ಅಷ್ಟೊಂದು ಶಕ್ತಿ ನನಗೆ ಇಲ್ಲ. ಆ ಅಭಿಪ್ರಾಯವೂ ನನಗೆ ಇಲ್ಲ ಎಂದರು.