ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಗುಜರಾತ್ನ ವಡೋದರಾದ ಪಾಣಿಗೇಟ್ ಪ್ರದೇಶದಲ್ಲಿ ನಡೆದಿದೆ.
ಈ ಕುರಿತು ಈಗಾಗಲೇ ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಮತ್ತು ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಗಲಭೆ ಕುರಿತು ಮತನಾಡಿರುವ ಜಿಲ್ಲಾ ಪೊಲೀಸ್ ಉಪ ಆಯುಕ್ತ ಯಶ್ಪಾಲ್ ಜಗನಿಯ ಗಲಭೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪರಿಸ್ಥಿತಿಯನ್ನು ಹತ್ತೋಟಿಗೆ ತರಲಾಗಿದ್ದು ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಲಭೆ ಸಂಭವಿಸುವ ಮೊದಲು ಬೀದಿ ದೀಪಗಳನ್ನು ಆರಿಸಲಾಗಿತ್ತು ಮತ್ತು ಉದ್ರಕ್ತರ ಗುಂಪು ಕಲ್ಲು ತೂರಾಟವನ್ನ ಶುರು ಮಾಡಿತ್ತು ಎಂದು ಹೇಳಿದ್ದಾರೆ.