2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನಾಳೆ ನಡೆಯಬೇಕಾಗಿದ್ದ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯಾಗಿರುವುದರಿಂದ ಪರೀಕೆಯನ್ನು ಮುಂದೂಡಲಾಗಿದೆ.
ಈ ಕುರಿತಾಗಿ ಪ್ರಕಟಣೆ ನೀಡಿರುವ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿರುವ ಸತ್ಯವತಿ ಅವರು, 24 ಜನವರಿಯಂದು ನಡೆಯಬೇಕಾಗಿದ್ದ ಪರೀಕ್ಷೆಗಳ ಪ್ರಶ್ನಾಪತ್ರಿಕೆಯು ದುಷ್ಕರ್ಮಿಗಳ ಕೈಸೇರಿರುವುದು ತಿಳಿದು ಬಂದಿದೆ. ಹಾಗಾಗಿ, ಅನಿವಾರ್ಯ ಕಾರಣಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ಈ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.