ಅಕ್ರಮ ಗಣಿಗಾರಿಕೆ ಪ್ರದೇಶದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ ದಾಳಿ ಮಾಡಿದ್ದಕ್ಕೆ ಕುಒಇತಗೊಂಡ ಮಾಫಿಯಾ ಗೂಂಡಾಗಳು ಅಧಿಕಾರಿ ಮೇಲೆ ಲಾರಿ ಹತ್ತಿಸಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದೆ.
ಸುರೇಂದ್ರ ಸಿಂಗ್ ಬಿಷ್ನೋಯ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಮಾಡಿರುವ ಪ್ರಕಾರ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿ ಗಣಿಗಾರಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಗೂಂಡಾಗಳು ಅಧಿಕಾರಿಯ ಮೇಲೆ ಲಾರಿ ಹರಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಆರೋಪಿಗಳಿಗೆ ಬಲೆ ಬೀಸಿರುವ ಪೊಲೀಸ್ ಅಧಿಕಾರಿಗಳು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅಧಿಕಾರಿಯು ಮೊದಲು ಲಾರಿಯನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಆದರೆ, ಚಾಲಕ ನಿಲ್ಲಿಸದೆ ಅಧಿಕಾರಿಯ ಮೇಲೆಯೇ ಹತ್ತಿಸಿಕೊಂಡು ಹೊರಟು ಹೋಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.