ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಏಪ್ರಿಲ್ 26ರಂದು ಜನ್ಮ ತಾಳಿದ್ದ ಮೂರು ಹುಲಿ ಮರಿಗಳ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದ್ದಾರೆ.
ಮೃಗಾಲಯದ ಗಂಡು ಹುಲಿ ರಾಕಿ ಹಾಗೂ ಹೆಣ್ಣು ಹುಲಿ ತಾರಾಗೆ ಸದರಿ ಮರಿಗಳು ಜನಿಸಿದ್ದವು. ಆದರೆ, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಿರಲಿಲ್ಲ ಕ್ರಿಸ್ಮಸ್ ಹಿನ್ನಲೆಯಲ್ಲಿ ಪ್ರವಾಸಿಗರು ಹೆಚ್ಚಾಗಿ ಮೃಗಾಲಯದ ಕಡೆ ಬರುತ್ತಿರುವ ಕಾರಣ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ವೇಳೆ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪಮಹಾಪೌರ ರೂಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ಕುಲಕರ್ಣಿ, ಮೃಗಾಲಯ ಪ್ರಾಧಿಕಾರದ ಸದಸ್ಯರಾದ ಗೋಕುಲ್ ಗೋವರ್ದನ್ ಇನ್ನಿತರರು ಉಪಸ್ಥಿತರಿದ್ದರು.