ನಿನ್ನೆಯೆಷ್ಟೇ ಚಿತ್ರದುರ್ಗದಲ್ಲಿ (Chitradurga) ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯ, ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕರಿಸಲಿದೆ ಎಂದಿದ್ದರು. ಇದೀಗ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಜಯಪ್ರಕಾಶ್ ಹೆಗ್ಡೆ (jaya prakash Hegde) ಅವರ ಅವಧಿಯನ್ನು ಫೆಬ್ರವರಿ 15 ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇತ್ತ ನವೆಂಬರ್ನಲ್ಲೇ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರದ ಅವಧಿ ಪೂರ್ಣಗೊಂಡಿದ್ದು, ಅದನ್ನು ಜನವರಿ 31 ರವರೆಗೂ ಸರ್ಕಾರ ವಿಸ್ತರಣೆ ಮಾಡಿತ್ತು. ಇದೀಗ ಆಯೋಗದಿಂದ ವರದಿ ಸ್ವೀಕರಿಸುವ ನಿಟ್ಟಿನಲ್ಲಿ, ಫೆಬ್ರವರಿ 15 ರವರೆಗೂ ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ವಿಸ್ತರಿಸಲಾಗಿದೆ.