ಕೊರೊನಾ ವೈರಸ್ ನಾಲ್ಕನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಸಿಎಂಗಳ ಸಭೆಯಲ್ಲಿ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವಂತೆ ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿದ್ದು, ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇಂದು ಮುಂಬೈನಲ್ಲಿ ಒಂದು ಲೀಟರ್ ಡೀಸೆಲ್ ಬೆಲೆಗೆ ಕೇಂದ್ರಕ್ಕೆ 24.38 ರೂ., ರಾಜ್ಯಕ್ಕೆ 22.37 ರೂ. ತೆರಿಗೆ ಹಾಕುತ್ತಿದೆ. ಪೆಟ್ರೋಲ್ 31.58 ರೂ ಕೇಂದ್ರದ ತೆರಿಗೆ ಮತ್ತು 32.55 ರೂ ರಾಜ್ಯ ತೆರಿಗೆ ವಿದುಸುತ್ತಿದೆ. ಈತರ ಇರುವಾಗ ರಾಜ್ಯದಿಂದ ಅದೇಗೆ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗುತ್ತೆ ಇದು ಸತ್ಯವಲ್ಲ, ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಾರ್ಯಾಲಯವು, “ನೇರ ತೆರಿಗೆ ಮತ್ತು ಜಿಎಸ್ಟಿ ಎರಡನ್ನೂ ಒಟ್ಟುಗೂಡಿಸಿ ಮಹಾರಾಷ್ಟ್ರ ದೇಶದಲ್ಲೇ ಅತಿ ಹೆಚ್ಚು ಶೇಕಡ 15ರಷ್ಟು ಜಿಎಸ್ಟಿಯನ್ನು ಸಂಗ್ರಹಿಸುತ್ತಿರುವ ದೇಶದ ಮೊದಲ ರಾಜ್ಯ ಮಹಾರಾಷ್ಟ್ರ” ಎಂದು ಹೇಕೊಂಡಿದೆ.
‘ಈಗಾಗಲೇ ತೆರಿಗೆ ವಿನಾಯಿತಿ ನೀಡಲಾಗಿದೆ’: ಉದ್ಧವ್
ಮುಂದುವರೆದು ಮಾತನಾಡಿದ ಉದ್ಧವ್ ಠಾಕ್ರೆ, ತಮ್ಮ ಸರ್ಕಾರ ಈಗಾಗಲೇ ನೈಸರ್ಗಿಕ ಅನಿಲದ ಮೇಲೆ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು ನೀಡಿದೆ ಎಂದು ಬುಧವಾರ ಹೇಳಿದ್ದಾರೆ. ನೈಸರ್ಗಿಕ ಅನಿಲ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಮೌಲ್ಯವರ್ಧಿತ ತೆರಿಗೆ ದರವನ್ನು ಶೇ.13.5ರಿಂದ ಶೇ.3ಕ್ಕೆ ಇಳಿಸಲಾಗಿದೆ.
“ವಿವಿಧ ತೆರಿಗೆ ಕಾನೂನುಗಳ ಅಡಿಯಲ್ಲಿ, ವರ್ಷಕ್ಕೆ 10,000 ರೂ.ವರೆಗಿನ ಬಾಕಿ ಮೊತ್ತವನ್ನು ಮನ್ನಾ ಮಾಡಿ ಸುಮಾರು 1 ಲಕ್ಷ ಸಣ್ಣ ವ್ಯಾಪಾರಿಗಳಿಗೆ ಲಾಭ ನೀಡಲಾಗಿದೆ. 10 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿರುವ ವ್ಯಾಪಾರಿಗಳಿಗೆ ಒಟ್ಟು ಬಾಕಿಯ ಶೇ.20ರಷ್ಟು ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಎರಡು ಲಕ್ಷಕ್ಕೂ ಹೆಚ್ಚು ಮಧ್ಯಮ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು. 50 ಲಕ್ಷ ಬಾಕಿ ಇದ್ದಲ್ಲಿ ಕಂತು ಅಥವಾ ಒಂದು ಬಾರಿ ಬಾಕಿ ಪಾವತಿ ಮಾಡುವ ಸೌಲಭ್ಯವನ್ನೂ ನೀಡಲಾಗಿದೆ ಎಂದು ಮಹಾರಾಷ್ಟ್ರ ಸಿಎಂ ಹೇಳಿದ್ದಾರೆ.
“ರಾಜ್ಯದಲ್ಲಿ ಆಮದು ಮಾಡಿಕೊಳ್ಳುವ ಚಿನ್ನ ಮತ್ತು ಬೆಳ್ಳಿಯ ಮೇಲಿನ ಶೇಕಡಾ 0.1 ಸ್ಟಾಂಪ್ ಸುಂಕವನ್ನು ಮನ್ನಾ ಮಾಡಲಾಗಿದೆ. ಮೆರಿಟೈಮ್ ಬೋರ್ಡ್ನ ಮಿತಿಯಲ್ಲಿ ಜನವರಿ 1, 2022 ರಿಂದ ಜಲಮಾರ್ಗಗಳಲ್ಲಿ ಫೆರಿ ಬೋಟ್ಗಳು, ರೋ-ರೋ ಬೋಟ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು, ಸಾಕುಪ್ರಾಣಿಗಳು, ವಾಹನಗಳು, ಸರಕುಗಳು ಇತ್ಯಾದಿಗಳಿಗೆ ಮೂರು ವರ್ಷಗಳವರೆಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.,”ಎಂದು ಹೇಳಿದ್ದಾರೆ.
ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?
ಕೇಂದ್ರ ಸರಕಾರದ ಸಲಹೆ ಮೇರೆಗೆ ಬಿಜೆಪಿ ಪಕ್ಷ ಆಡಳಿತದಲ್ಲಿರುವ ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿತ್ತು. ಆದರೆ ಪಶ್ಚಿಮ ಬಂಗಾಳ, ಕೇರಳ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಲಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯೇತರ ಸರಕಾರಗಳನ್ನು ತರಾಟೆಗೆ ತೆಗೆದುಕೊಂಡರು.
ಕೆಲವು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಇಳಿಸದೇ ಇರುವುದರಿಂದ ತಮ್ಮದೇ ರಾಜ್ಯದ ಜನತೆಗೆ ಬೆಲೆ ಕಡಿತದ ಲಾಭ ದೊರೆಯದಂತೆ ಮಾಡಿವೆ. ಇದರಿಂದ ಬೆಲೆ ಇಳಿಸಿದ ರಾಜ್ಯಗಳಿಗೆ ವಲಸೆ ಹೋಗುವಂತೆ ಆಗಿದೆ. ಇದರಿಂದ ಅಕ್ಕಪಕ್ಕದ ರಾಜ್ಯಗಳಿಗೆ ತೈಲ ಪೂರೈಕೆಯಲ್ಲಿ ತೊಂದರೆ ಆಗುತ್ತಿದೆ ಎಂದು ಅವರುಹೇಳಿದ್ದರು..